ತುಮಕೂರು: ಲೋಕಸಭಾ ಚುನಾವಣೆಗೆ ಪಕ್ಷಗಳು ಬಾರೀ ಯೋಚಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದಾರೆ. ಇದರ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ ಈ ಬಾರಿ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಹಿಡಿಯಲಿದೆ. ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ ದೇಶದ ಗದ್ದುಗೆ ಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ 135 ಸೀಟು ಪಡೆಯಲಿದೆ ಎಂದು ಈ ಹಿಂದೆ ಯಶ್ವಂತ ಗುರೂಜಿ ನಿಖರ ಭವಿಷ್ಯ ನುಡಿದಿದ್ದರು. ಅಲ್ಲದೆ ಕೊರೊನಾ ಮಹಾಮಾರಿ ಬರುವ ಬಗ್ಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋ ಬಗ್ಗೆ ಗುರೂಜಿ ಭವಿಷ್ಯ ನುಡಿದಿದ್ದರು. ಸದ್ಯ ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಒಬ್ಬಳು ಸ್ತ್ರೀ, ಪುರುಷನ ಎದುರು ದುರ್ಗಿಯಾಗಿ ನಿಂತು ಪುರುಷನಿಗೆ ಭಯ ಹುಟ್ಟಿಸಿ ತಾನೇ ಅಧಿಕಾರವನ್ನ ಮಾಡುವಳು. ತಾಯಿ ಮಮತೆಯಿಂದ ತನ್ನ ಅಧಿಕಾರವನ್ನ ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟುಕೊಡುವಳು ಎಂದಿದ್ದಾರೆ.
ಪ್ರಧಾನಿಯಾಗೋ ಯೋಗ ಹೊಂದಿರೋದು ಪ್ರಿಯಾಂಕ ಗಾಂಧಿ ಅವರು. ಬಳಿಕ ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ. ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೇ ಮೋದಿ ಅವರಿಗೆ ಪ್ರಧಾನಿಯಾಗೋ ಯೋಗವಿತ್ತು. ಆದರೇ ಈಗ ಮೋದಿ ಅವರಿಗೆ ಆ ಯೋಗ ಇಲ್ಲ. ಅವರಿಗೆ ಅನಾರೋಗ್ಯ ಕಾಡಬಹುದು. ಸದ್ಯ ಪ್ರಿಯಾಂಕ ಗಾಂಧಿಗೆ ಹಂಸಕ, ಚಂದ್ರಮಂಗಳ, ಬುಧಾಧಿತ್ಯ ಯೋಗ ಶುರುವಾಗಿದೆ. ಈ ಯೋಗದಿಂದಲೇ ಪ್ರಧಾನಿ ಪಟ್ಟ ಸಿಗೋ ಅವಕಾಶ ಒದಗಿಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.