ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತನಿಖೆಗೆ ತಡೆ ಕೋರಿ ಡಿಕೆ ಶಿ ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿ ಹಾಗೂ ವಿಭಾಗೀಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯನ್ನ ಹಿಂದಕ್ಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ.
ರಾಜ್ಯ ಸರ್ಕಾರ 2019ರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಈಗ ಹಿಂದಕ್ಕೆ ಪಡೆದಿದೆ. ಸರ್ಕಾರದ ಆದೇಶವನ್ನು ಇಲ್ಲಿ ಯಾರೂ ಚಾಲೆಂಜ್ ಮಾಡಿಲ್ಲ. ಡಿ.ಕೆ ಶಿವಕುಮಾರ್ ಪರ ವಕೀಲರು ತಮ್ಮ ಅರ್ಜಿಯನ್ನ ಹಾಗೂ ಮೇಲ್ಮನವಿಯನ್ನ ವಾಪಸ್ ಪಡೆದಿದ್ದಾರೆ. ಹೀಗಾಗಿ ಅರ್ಜಿ ಇತ್ಯರ್ಥಪಡಿಸಲಾಗಿದೆ ಅಂತ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
ಹೀಗಾಗಿ ಪ್ರಕರಣದಲ್ಲಿ ಕೇಸ್ ಹಿಂಪಡೆದಿರುವ ಕ್ರಮವನ್ನು ಚಾಲೆಂಜ್ ಮಾಡೋಕೆ ಇನ್ನೂ ಸಿಬಿಐಗೆ ಅವಕಾಶವಿದೆ. ಜೊತೆಗೆ ತನಿಖೆ ಮುಂದುವರೆಸೋಕೂ ಸಿಬಿಐಗೆ ಅವಕಾಶ ಇದೆ. ಇದೇ ಕಾರಣಕ್ಕೆ ಇವತ್ತಿನ ಕೋರ್ಟ್ ತೀರ್ಮಾನ ಡಿ.ಕೆ.ಶಿವಕುಮಾರ್ಗೆ ಕೇವಲ ತಾತ್ಕಾಲಿಕ ರಿಲೀಫ್ ಮಾತ್ರ.
ಡಿ.ಕೆ.ಶಿವಕುಮಾರ್ ಪರ ಕಾಂಗ್ರೆಸ್ ನಾಯಕರು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಸಿಬಿಐ ಪರ ಪ್ರಸನ್ನ ಕುಮಾರ್ ಜೊತೆಗೆ ಡಿಕೆಎಸ್ ಪರ ಪರ ಸಿನಿಯರ್ ಕೌನ್ಸಿಲ್ ಉದಯ ಹೊಳ್ಳ ಕೂಡ ವಿಚಾರಣೆ ವೇಳೆ ಹಾಜರಿದ್ದರು.