ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಬಿರು ಬಿಸಿಲಿನ ಜೊತೆ ಈಶಾನ್ಯ ಭಾಗಳಲ್ಲಿ ಏಪ್ರಿಲ್ 9ರವರೆಗೆ ಮಳೆಕೂಡ ಬರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ, ಉತ್ತರ ಕರ್ನಾಟಕ, ಆಂಧ್ರ ಪ್ರದೇಶದ ಕರಾವಳಿ ಭಾಗ, ತೆಲಂಗಾಣದಲ್ಲಿ ಭಾರೀ ಬಿಸಿಲು ಇರಲಿದೆ.
ತಮಿಳುನಾಡು, ಪುದಚೆರಿ, ಕೇರಳ, ಮೇಘಾಲಯ, ನಾಗಲ್ಯಾಂಡ್, ಮಣಿಪುರ, ತ್ರಿಪುರ, ಅರುಣಾಚಲಪ್ರದೇಶ, ಒಡಿಶಾ , ಪಶ್ಚಿಮ ಬಂಗಾಳದಲ್ಲಿ ಮಳೆಯಾಗಲಿದೆ ಎಂದಿದೆ.
ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ 7 ದಿನಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಬಿಸಿಲಿನ ಬೇಗೆ ಮತ್ತು ಅದರ ಪರಿಣಾಮವನ್ನು ಎದುರಿಸಲು ಸಿದ್ಧರಾಗಿರುವಂತೆ ಆರೋಗ್ಯ ಇಲಾಖೆಗೆ ಕೇಂದ್ರ ಸಚಿವ ಮನ್ಸುಕ್ ಮಾಂಡವಿಯ ತಿಳಿಸಿದ್ದಾರೆ.