ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ವಿಚಾರವನ್ನು ಕಿಯೋನಿಕ್ಸ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಸಂತ್ ಬಂಗೇರ ಅವರು ಕೆದಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಸಚಿವರಿಗೆ ಸದಾಶಿವನಗರದಲ್ಲಿ 7 ರಿಂದ 8 ಬಂಗಲೆ, ಜಮೀನು, ಕಾರು ಎಲ್ಲಿಂದ ಬರುತ್ತೆ. 2013 ರಿಂದ 2018ರವರೆಗೆ ದಾಖಲಾತಿ ತೆಗೆದರೆ ಎಲ್ಲಾ ಬಯಲಿಗೆ ಬರುತ್ತೆ ಎಂದು ವಸಂತ್ ಬಂಗೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕಿಯೋನಿಕ್ಸ್ ಎಂಡಿ ಸಂಗಪ್ಪ ವಿರುದ್ದವೂ ಆಕ್ರೋಶ ಹೊರಹಾಕಿದ್ದು, ‘ಅಂಗವಿಕಲರ ಹಣವನ್ನ ಇಟ್ಟುಕೊಂಡು ಆಟ ಆಡಿಸುತ್ತಿದ್ದ. ಇದನ್ನು ಬಯಲಿಗೆಳೆದ ಮೇಲೆ ಸರ್ಕಾರವೇ ಅಮಾನತು ಮಾಡಿತ್ತು. ಇಂಥವನನ್ನು ಕಿಯೋನಿಕ್ಸ್ ಎಂಡಿ ಹುದ್ದೆಯಲ್ಲಿ ಕೂರಿಸಿದ್ದೀರೆಂದು ಕಿಡಿ ಕಾರಿದ್ದಾರೆ.
ಕಿಯೋನಿಕ್ಸ್ ಸಂಬಂಧ ಸಚಿವ ಪ್ರಿಯಾಂಕ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನಾವು ಕಿಯೋನಿಕ್ಸ್ ಸಂಸ್ಥೆಯಲ್ಲಿ ಅನ್ನ ತಿಂದಿದ್ದೇವೆ. ನೀವು ಬಂದಾಗ ಅವರದ್ದು ಹುಡುಕುವುದು, ಅವರು ಬಂದಾಗ ನಿಮ್ಮದು ಹುಡುಕುವುದು. ಉತ್ತರ ಕರ್ನಾಟಕದ ತಾಂಡ ಅಭಿವೃದ್ಧಿ ನಿಗಮದಿಂದ ಶುದ್ಧ ನೀರು ಕುಡಿಯುವ ಮಿಷನ್ನ್ನು 2019 ರಲ್ಲಿ ಹಾಕಿ, 5 ಕೋಟಿ 50 ಲಕ್ಷ ಹಣವನ್ನ ಬಿಡುಗಡೆ ಮಾಡಿದ್ದಾರೆ.
ಇದರಲ್ಲಿ ಬರೋಬ್ಬರಿ ಒಂದು ಲಕ್ಷ ಹಣ ವ್ಯತ್ಯಾಸ ಇದೆ. ನಮ್ಮನ್ನ ಕಳ್ಳರಂತೆ ಬಿಂಬಿಸಲಾಗುತ್ತಿದೆ. ಪ್ರತಿ ವರ್ಷ ಅಡಿಟ್ ಆಗುತ್ತೆ. ಯಾವುದೇ ಇಲಾಖೆಯಲ್ಲಿ ಹೋದರೂ, ನ್ಯೂನತೆಗಳನ್ನ ಬರೆದು ಬರುತ್ತಾರೆ. ಯಾರೋ ನಾಲ್ಕು ಜನ ಕಳ್ಳರು ಮಾಡಿರಬಹುದು, ಅವರನ್ನ ಬ್ಲಾಕ್ ಲಿಸ್ಟ್ಗೆ ಹಾಕಿ, ಅವರ ಮೇಲೆ ನೀವು ಕ್ರಮಕೈಗೊಳ್ಳಿ ಎಂದರು.
ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.
ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್ಗಳನ್ನು…
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…
ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…