News Karnataka Kannada
Friday, May 03 2024
ಬೆಂಗಳೂರು

ಇಂದು ಚಂದ್ರನನ್ನು ಚುಂಬಿಸಲಿದ್ದಾನೆ ‘ವಿಕ್ರಂ’: ಐತಿಹಾಸಿಕ ಕ್ಷಣದತ್ತ ಎಲ್ಲರ ಚಿತ್ತ

Video of 'Pragyan' leaving lander on moon released
Photo Credit : News Kannada

ಬೆಂಗಳೂರು: ಬಾಹ್ಯಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ ರೆಡಿಯಾಗಿದೆ. ಇಂದು (ಆಗಸ್ಟ್ 23) ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವ ಮೇಲ್ಮೈ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲು ಸಮಯ ನಿಗದಿ ಮಾಡಲಾಗಿದೆ.

ಆದ್ರೆ ಸಂಜೆ 5.45ಕ್ಕೆ ಲ್ಯಾಂಡರ್ ಇಳಿಯುವ ಪ್ರಕ್ರಿಯೆ ಆರಂಭವಾಗಲಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಸೂರ್ಯ ರಶ್ಮಿ ಬಿದ್ದ ಬಳಿಕವಷ್ಟೇ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಬರೋಬ್ಬರಿ 45 ದಿನಗಳ ಪ್ರಯಾಣದ ಮೂಲಕ ವಿಕ್ರಮ್​ ಲ್ಯಾಂಡರ್​ ಮೂರು ಲಕ್ಷ 84 ಸಾವಿರ ಕಿಲೋ ಮೀಟರ್​ ದೂರ ಇರುವ ಚಂದ್ರನ ಸಮೀಪಕ್ಕೆ ತಲುಪಿದೆ.

ಇನ್ನು ಚಂದ್ರನ ಕಕ್ಷೆಗೆ ಸೇರಿದ ಬಳಿಕ ನೌಕೆ ಈವರೆಗೂ ಐದು ಬಾರಿ ಪ್ರದಕ್ಷಿಣೆ ಹಾಕಿದೆ. ಇದೀಗ ಲ್ಯಾಂಡರ್‌ ನಿಧಾನಕ್ಕೆ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಪ್ರಾರಂಭಿಸುತ್ತಿದ್ದು, ಲ್ಯಾಂಡರ್​ನಿಂದ ಪ್ರಗ್ಯಾನ್​ ರೋವರ್ ಹೊರಬರಲು ಕ್ಷಣಗಣನೆ ಶುರುವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು