News Karnataka Kannada
Saturday, May 11 2024
ಬೆಂಗಳೂರು

ಚೈತ್ರಾ ಕುಂದಾಪುರ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

Villagers clean the place where Chaitra Kundapura walked with Theertha
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಈಗ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಆಕೆ ಮಾಡಿದ ಹಲವು ಅವಾಂತರಗಳನ್ನು ಜನರು ಹೇಳಿಕೊಳ್ಳಲು ಆರಂಭಿಸಿದ್ದಾರೆ.

ಬೆಂಗಳೂರು: ಚೈತ್ರಾ ಕುಂದಾಪುರ ಪ್ರಕರಣದ ರಾಜ್ಯದಲ್ಲಿ ಭಾರಿ ಸುದ್ದಿ ಮಾಡುತ್ತಿದೆ. ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ ಬಿಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಜನರ ಸಂಭ್ರಮ ಮುಗಿಲು ಮುಟ್ಟಿತ್ತು. ಚೈತ್ರಾ ಓಡಾಡಿದ ಜಾಗವನ್ನು ಗ್ರಾಮಸ್ಥರು ಸೇರಿ ತೀರ್ಥ ಹಾಕಿ ಶುದ್ಧ ಮಾಡಿದ ಘಟನೆ ಕೂಡ ನಡೆದಿದೆ.

ಕಳೆದ ವರ್ಷ ಮಾವಿನಕಟ್ಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕ್ಕ ವಿಷಯವನ್ನ ದೊಡ್ಡದು ಮಾಡಿ ಭಾಷಣ ಮಾಡುವ ಮೂಲಕ ಗ್ರಾಮದಲ್ಲಿ ಎರಡು ಬಣಗಳ ನಡುವೆ ಗಲಾಟೆ ತಂದಿಟ್ಟಿದ್ದರಂತೆ. ಹೀಗಾಗಿ ಗ್ರಾಮ ದೇವರಿಗೆ ಚೈತ್ರಾ ವಿರುದ್ಧ ಪ್ರಾರ್ಥನೆ ಮಾಡಿ, ಒಂದು ವರ್ಷದೊಳಗೆ ಶಿಕ್ಷೆ ನೋಡುವಂತೆ ಗ್ರಾಮಸ್ಥರು ಪ್ರಾರ್ಥನೆ ಮಾಡಿದ್ದರು. ಇದೀಗ ಚೈತ್ರಾ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಲೆಗೆ ಬಿಳುತ್ತಿದ್ದಂತೆ ದೇವರಿಗೆ ವಿಶೇಷ ಪೂಜೆ ನಡೆಸಿದ ಗ್ರಾಮಸ್ಥರು, ಹರಕೆ ತಿರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು