ಬೆಂಗಳೂರು : ನಟ ಹಾಗೂ ಹಾಸ್ಯ ಕಲಾವಿದ ವೀರ್ ದಾಸ್ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಮ್ಮಿ’ ಪ್ರಶಸ್ತಿಯನ್ನು ಸಿಕ್ಕಿತ್ತು. ಆದರೆ ಇದೀಗ ಅವರನ್ನು ಬೆಂಗಳೂರಿನಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅವರು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ.
ಭದ್ರತಾ ಸಿಬ್ಬಂದಿಯೊಬ್ಬರು ‘ಬ್ಯಾಗ್ನಲ್ಲಿ ಚೂಪಾದ ಮೂರ್ತಿ ಇದೆಯೇ’ ಎಂದು ಪ್ರಶ್ನಿಸಿದಾಗ ‘ಇಲ್ಲ ಸರ್ ಅದು ಪ್ರಶಸ್ತಿ. ಅದಕ್ಕೆ ಚೂಪಾದ ರೆಕ್ಕೆ ಇವೆ’ ಎಂದು ವೀರ್ ಹೇಳಿದ್ದಾರೆ. ಬಳಿಕ ಅದನ್ನು ತೆಗೆದು ಅಧಿಕಾರಿಗೆ ತೋರಿಸಿದಾಗ ಅವರು ‘ಚೆನ್ನಾಗಿದೆ. ನೀವೇನು ಮಾಡುತ್ತೀರಿ’ ಎಂದು ಕೇಳಿದ್ದಾರೆ. ಅದಕ್ಕೆ ವೀರ್, ‘ಜೋಕ್ ಮಾಡುತ್ತೇನೆ’ ಎಂದಿದ್ದಾರೆ. ಹೀಗೆ ಇಬ್ಬರ ಸಂಭಾಷಣೆ ನಗುವಿನಲ್ಲಿ ಅಂತ್ಯವಾಗಿದೆ. ಎಮ್ಮಿ ಪ್ರಶಸ್ತಿ ಟ್ರೋಫಿಯು ಮನುಷ್ಯಾಕಾರದಲ್ಲಿದ್ದು, ಇದರ ಬಾಹುಗಳಿಗೆ ಎರಡು ಚೂಪಾದ ರೆಕ್ಕೆಗಳಿವೆ ಎಂದು ವೀರ್ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.
ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.