ಬೆಂಗಳೂರು: “ಈಗ ಯಾರ್ಯಾರು ಪಕ್ಷದ ಸೂಚನೆ ಮೀರಿ ಮಾತನಾಡಿದ್ದಾರೋ ಅವರಿಗೆಲ್ಲಾ ನೋಟಿಸ್ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆಯ ಸಂದೇಶ ನೀಡಿದರು.
ಕೆಲವು ಶಾಸಕರು ನಿಮ್ಮ ಪರವಾಗಿ ಲಾಬಿ ಮಾತುಗಳನ್ನಾಡುತ್ತಿದ್ದಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಹುಬ್ಬಳ್ಳಿಯ ಪ್ರವಾಸಿ ಮಂದಿರದ ಬಳಿ ಶುಕ್ರವಾರ ಹೀಗೆ ಪ್ರತಿಕ್ರಿಯೆ ನೀಡಿದರು.
ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದ ನಂತರ, ಇಬ್ಬರೂ ಸೇರಿ ಪ್ರಮಾಣವಚನ ಸ್ವೀಕರಿಸಿದ್ದೇವೆ. ಆಗ ನಿಮಗೆಲ್ಲಾ ಹೇಳಿದ್ವಾ ನಾವು? ಸುಮ್ಮನೆ ಯಾಕೆ ಇಲ್ಲದ ವಿಷಯ ನೀವೇ ಸೃಷ್ಟಿ ಮಾಡಿಕೊಳ್ಳುತ್ತೀರಾ? ಇದೆಲ್ಲಾ ಅವಶ್ಯಕತೆಯಿಲ್ಲ” ಎಂದು ಹೇಳಿದರು.
ಅಧಿಕಾರ ಹಂಚಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, “ಯಾವುದೇ ಆಸ್ತಿಯಿಲ್ಲ ಹಂಚಿಕೊಳ್ಳೋಕೆ” ಎಂದು ಉತ್ತರಿಸಿದರು.
ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…
ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಕಾದಿದೆ. ಪ್ಲೇ…
ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶನಾಗಿದ್ದಾನೆ.