ಬೆಂಗಳೂರು

ಇದ್ಯಾವುದು ಹೊಸ ಧರ್ಮ ? ಸನಾತನ?? ಎಂದು ಪ್ರಶ್ನಿಸಿದ ನಟ ಕಿಶೋರ್‌

ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಕೋವಿಡ್‌ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ತಲೆ ಕಡಿಯಬೇಕು ಎಂದು ಹೇಳಿಕೆ ನೀಡಿದ್ದ ಆಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರ ವಿರುದ್ಧ ನಟ ಕಿಶೋರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಅವರು ಇಷ್ಟು ದಿನ ಹಿಂದೂ ಹಿಂದೂ ಎಂದು ಅರಚುತ್ತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟಿರೆನುಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅವರು ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿದ್ದು ಹೀಗಿದೆ. ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ?, ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ? ಸನಾತನ? ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು.

ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ ..

ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ.

ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ. ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವ ಎಂದು ಬರೆದುಕೊಂಡಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago