ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಒತ್ತಾಯಿಸಿ ರೈತಪರ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಈ ನಿಟ್ಟಿನಲ್ಲಿ ನಾಳೆ ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಕಿರು ವಿವರ ಇಲ್ಲಿದೆ.
ಅಗತ್ಯ ಸೇವೆಗಳಾದ ಔಷಧ, ಆಸ್ಪತ್ರೆ, ಹಾಲು, ಪೇಪರ್, ಅಂಬುಲೆನ್ಸ್ ಎಂದಿನಂತೆ ಕಾರ್ಯನಿರ್ವಾಹಿಸಲಿವೆ. ಉಳಿದಂತೆ ಹೋಟೆಲ್ಗಳು, ಆಟೋಗಳು ಸಿಗಲ್ಲ, ಟ್ಯಾಕ್ಸಿ ಓಡಾಡಲ್ಲ, ಓಲಾ, ಉಬರ್ ಸೇವೆ ಲಭ್ಯವಿರುವುದಿಲ್ಲ. ಬೀದಿಬದಿ ವ್ಯಾಪಾರ, ಪೆಟ್ರೋಲ್ ಬಂಕ್, ಶಾಲಾ, ಕಾಲೇಜು, ಬಿಬಿಎಂಪಿ ನೌಕರರು, ಬಿಎಂಟಿಸಿ ಬಸ್ ಸಂಚಾರ, ಕೈಗಾರಿಕೆಗಳು, ವಾಣಿಜ್ಯೋದ್ಯಮ, ಚಿಕ್ಕಪೇಟೆ ಅಂಗಡಿಗಳು, ಕೆಎಸ್ ಆರ್ ಟಿಸಿ ಬಸ್, ಮಾರ್ಕೆಟ್ಗಳು ಬಂದ್ ಆಗುತ್ತವೆ.
ಖಾಸಗಿ ಶಾಲಾ ಬಸ್ ಒಕ್ಕೂಟವೂ ಬೆಂಬಲ ನೀಡಿವೆ. ಇದರಿಂದ ಅಂದು ಸಂಪೂರ್ಣ ಸಾರಿಗೆ ವ್ಯತ್ಯಯವಾಗುವುದು ಖಚಿತವಾಗಿವೆ. ಶಾಲೆಗಳಿಗೂ ರಜೆ ಘೋಷಿಸುವ ಸಾಧ್ಯತೆಗಳಿವೆ. ಈ ಬಂದ್ಗೆ ಎಲ್ಲಾ ಸಂಘಟನೆಗಳ ಜೊತೆಗೆ ಸಿನಿಮಾ ಉದ್ಯಮ ಆಟೋ ರಿಕ್ಷಾ, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು, ಐಟಿ-ಬಿಟಿ ಕಂಪನಿಯವರು, ವಿದ್ಯಾಸಂಸ್ಥೆಯವರು, ಅಪಾಟ್ರ್ಮೆಂಟ್ ಸಂಘ ಸಂಸ್ಥೆಗಳು ಖಾಸಗಿ ಕಾರ್ಖಾನೆಯವರು, ಕೈಗಾರಿಕೆಗಳು ವರ್ತಕರು ಹೋಟೆಲ್ ಉದ್ದಿಮೆದಾರರು, ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಎಂದು ಕೋರಲಾಗಿದೆ.
ಬೆಂಗಳೂರು ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ. ಸಾರಿಗೆ ಬಸ್ ರಸ್ತೆಗೆ ಇಳಿಯುವುದಿಲ್ಲ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆಂಡ್ ವಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ. ಬಂದ್ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.