ಬೆಂಗಳೂರು: ರಾಮನಗರವನ್ನು ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದ್ದೇ ಆದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.
ನನ್ನ ಆರೋಗ್ಯ ಸರಿಯಿಲ್ಲ ಆದರೂ ಕೂಡ ಸತ್ಯಾಗ್ರಹ ಮಾಡುತ್ತೇನೆ. ನನಗೆ ರಾಮನಗರದೊಂದಿಗೆ ವ್ಯಾವಹಾರಿಕ ಸಂಬಂಧಗಳೇನು ಇಲ್ಲ. ಆದರೆ ಈ ಜಿಲ್ಲೆಯೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿದ್ದೇನೆ. ನಾನು ಹುಟ್ಟಿದ್ದು ಹಾಸನದಲ್ಲಿ ಆದರೂ ನನ್ನ ಅಂತ್ಯ ಮಾತ್ರ ರಾಮನಗರದಲ್ಲಿ ಆಗುತ್ತದೆ. ಕೊನೆ ಉಸಿರಿನ ತನ ಈ ರಾಮನಗರಕ್ಕಾಗಿ ಹೋರಾಡುತ್ತೇನೆ ಎಂದು ಹೇಳಿದರು.
ನನ್ನ ತಂದೆಯವರ ಹತ್ತಿರ ಪಂಚೆ, ಜುಬ್ಬಾ ಬಿಟ್ಟರೇ ಬೇರೆ ಏನೂ ಇಲ್ಲ. ನಾವು ಹಣ ಮಾಡಿದ್ದೇವೆ, ಆದರೆ ಲೂಟಿ ಹೊಡೆದು ಹಣ ಮಾಡಿಲ್ಲ ಎಚ್ ಡಿಕೆ ವಿರುದ್ಧ ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.