News Karnataka Kannada
Sunday, May 05 2024
ಬೆಂಗಳೂರು

ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ತೆಗೆದರೆ ಪ್ರತಿಭಟನೆ ಮಾಡ್ತೀವಿ: ಆರ್.‌ ಅಶೋಕ್

Will protest if Veer Savarkar's photo is taken in Assembly: R Chandrasekhar Rao Ashok
Photo Credit : News Kannada

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪೂರ್ಣಗೊಂಡಿದೆ. ಅದೇ ರೀತಿ ಪ್ರತಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಆದರೆ ಪಕ್ಷದೊಳಗಿನ ಆಂತರಿಕ ತಳಮಳ ತೊಳಲಾಟ ಇನ್ನು ಮುಗಿದಿಲ್ಲ. ಆದರೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಮಾತ್ರ ರಾಜ್ಯ ಸರ್ಕಾರದ ವಿರುದ್ಧ ತೊಡೆ ತಟ್ಟಿ ನಿಂತಂತಿದೆ.

ವಿಧಾನಸಭೆಯಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಳವಡಿಸಿದ್ದ ವೀರ್ ಸಾವರ್ಕರ್ ಅವರ ಫೋಟೋ ತೆಗೆಯದಂತೆ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಿ, ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಳವಡಿಸಲು ಯೋಜಿಸಿದೆ. ಆದರೆ ವೀರ ಸಾವರ್ಕರ್ ಅವರು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಜೈಲುವಾಸ ಅನುಭವಿಸಿದ ದೇಶಪ್ರೇಮಿ ಎಂದು ಅಶೋಕ್‌ ಹೇಳಿದ್ದಾರೆ.

ಮುಂದುವರಿದು ಈ ಹಿಂದೆ ಬಿಜೆಪಿ ಸರ್ಕಾರ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಿತ್ತು. ಈಗ ಅದನ್ನು ತೆಗೆದುಹಾಕಲು ಕಾಂಗ್ರೆಸ್ ಮುಂದಾಗಿದೆ. ಸಾವರ್ಕರ್ ಫೋಟೋದ ಬದಲು ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಫೋಟೋವನ್ನು ಹಾಕಬೇಕೆಂದು ಅವರು(ಸರ್ಕಾರ) ವಾದಿಸುತ್ತಿದ್ದಾರೆ. ನೆಹರೂ ಭಾವಚಿತ್ರ ಅಳವಡಿಸುವುದು ವಂಶಪಾರಂಪರ್ಯ ರಾಜಕಾರಣದ ವೈಭವೀಕರಣ ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಜ್ಜ, ತಾಯಿ, ಮಗ ಮತ್ತು ಮೊಮ್ಮಗನ ಫೋಟೋಗಳನ್ನು ಮಾತ್ರ ಹಾಕಲು ಬಯಸುತ್ತದೆ. ಒಂದು ವೇಳೆ ಸಾವರ್ಕರ್ ಫೋಟೋ ತೆಗೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು