ಮತ ಹಾಕಿ ಫೋಟೋ ಕ್ಲಿಕ್ಕಿಸಿ : 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

ಬೆಂಗಳೂರು: ನಾಳೆ ಹಲವಡೆ ಮತದಾನದ ಹಬ್ಬ, ಮತಹಾಕುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಲಾಗುತ್ತದೆ.ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 7 ಗಂಟೆಯಿಂದ ಮತದಾನ ಪ್ರಾರಂಭವಾಗಲಿದೆ. ಸುಮಾರು 2,88,19,342 ಮತದಾರರು ಮತದಾನ ಮಾಡಲಿದ್ದಾರೆ. ಅದರಲ್ಲಿ 1,44,28,099 ಪುರುಷರು, 1,43,88,176 ಮಹಿಳೆಯರು ಮತದಾನ ಮಾಡಲಿದ್ದಾರೆ. ಸುಮಾರು 3,067 ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ.

ಮತದಾನದ ಸಂದರ್ಭದಲ್ಲಿ ರಾಜ್ಯ ಚುನಾವಣಾ ಅಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಮತದಾನ ವಿಷಯವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಿದೆ. ಎಲೆಕ್ಷನ್​ ದಿನ ವಿಶಿಷ್ಟ ಫೋಟೋದಲ್ಲಿ ಸೆರೆಹಿಡಿದರೆ ನಗದು ಬಹುಮಾನ ನೀಡುವುದಾಗಿ ರಾಜ್ಯ ಚುನಾವನಾ ಆಯೋಗ ಘೋಷಿಸಿದೆ.

ಅಷ್ಟು ಮಾತ್ರವಲ್ಲ, ಅತ್ಯುತ್ತಮ ಫೋಟೋ ಕ್ಲಿಕ್ಕಿಸಿದರೆ ಪ್ರಮಾಣ ಪತ್ರದ ಜೊತೆಗೆ ನಗದನ್ನು ನೀಡುವುದಾಗಿ ತಿಳಿಸಿದೆ.ಫೋಟೋ ಕ್ಲಿಕ್ಕಿಸಿದ ಬಳಿಕ ಛಾಯಾಗ್ರಾಹಕರ ವಿವರಗಳನ್ನು Mediacellceokarnataka@gmail.com ಸಲ್ಲಿಸಬೇಕಿದೆ. ಮೇ 15ರವರೆಗೆ ಫೋಟೋ ಕಳುಹಿಸಲು ಸಮಯವಕಾಶ ನೀಡಲಾಗಿದೆ. ಅತ್ಯುತ್ತಮ ಫೋಟೋಗೆ ಬಹುಮಾನ ಸಿಗಲಿದೆ.

ಅಂದಹಾಗೆಯೇ ಬೆಸ್ಟ್​ ಫೋಟೋ ಕ್ಲಿಕ್ಕಿಸಿದ ವಿಜೇತರಿಗೆ ಪ್ರಥಮ 25 ಸಾವಿರ, ದ್ವಿತೀಯ 15 ಸಾವಿರ ಮತ್ತು ತೃತೀಯ 10 ಸಾವಿರ ಬಹುಮಾನ ಸಿಗಲಿದೆ.ಇದಲ್ಲಿದೆ ಸಮಾಧಾನಕರ ಬಹುಮಾನವಾಗಿ 6 ಸಾವಿರ ರೂಪಾಯಿ ಜೊತೆಗೆ ವಿಶೇಷ ಬಹುಮಾನವಾಗಿ 5 ಸಾವಿರ ರೂಪಾಯಿ ನಗದು ಸಿಗಲಿದೆ.

 

Nisarga K

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago