ಬೆಂಗಳೂರು: ಕೆಎಸ್ಆರ್ಟಿಸಿ ಮಹಿಳಾ ಕಂಡಕ್ಟರ್ ಒಬ್ಬರು ಕಣ್ಣಿರಿಟ್ಟು ವಿಡಿಯೋ ಮಾಡಿದ್ದು ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಚಾರವಾಗಿ ನಿಮಗೆ ನಿಜಕ್ಕೂ ಮಹಿಳೆಯರ ಮೇಲೆ ಕಿಂಚಿತ್ತು ಕಾಳಜಿ ಇದ್ದರೆ ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಬಿಜೆಪಿ ವಾಗ್ದಾಳಿ ಮಾಡಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು ಎಂದು ಕಿಡಿಕಾರಿದೆ.
ಬಿಎಂಟಿಸಿ ಮಹಿಳಾ ಕಂಡಕ್ಟರ್ಗೆ ಅವರ ಮೇಲಧಿಕಾರಿಗಳು ಇನ್ನಿಲ್ಲದಂತೆ ನೀಡಿದ ಕಿರುಕುಳದ ಬಗ್ಗೆ ದೂರು ನೀಡಿ ನಾಲ್ಕು ದಿನಗಳಾದರೂ ಯಾವುದೇ ಕ್ರಮವಿಲ್ಲ, ಕನಿಷ್ಟ ದೂರು ನೀಡಿದ ಮಹಿಳೆಗೆ ಸಾಂತ್ವನವೂ ಹೇಳಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೇ, ಇದೇನಾ ನೀವು ಮಹಿಳೆಯರಿಗೆ ನೀಡಿದ “ಶಕ್ತಿ” ಎಂದು ಪ್ರಶ್ನೆ ಮಾಡಿದೆ.
ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ @INCKarnataka ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು.
ಬಿಎಂಟಿಸಿ ಮಹಿಳಾ ಕಂಡಕ್ಟರ್ಗೆ ಅವರ ಮೇಲಧಿಕಾರಿಗಳು ಇನ್ನಿಲ್ಲದಂತೆ ನೀಡಿದ… pic.twitter.com/1QcWiJOaL6
— BJP Karnataka (@BJP4Karnataka) March 17, 2024