ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ವಾಗ್ದಾಳಿ ನಡೆಸಿ, ಯತ್ನಾಳ್ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳೋಕೆ ಹೇಳಿ ಎಂದು ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜನರನ್ನ ಹುಚ್ಚರನ್ನಾಗಿ ಮಾಡ್ತಿದೆ ಎಂಬ ಸಂಸದ ಹೆಗೆಡೆ ಹೇಳಿಕೆಗೆ ತಿರುಗೇಟು ನೀಡಿದ ಮಧು ಬಂಗಾರಪ್ಪ, ಹೆಗಡೆ ದೊಡ್ಡ ಹುಚ್ಚ, ಏಲೆಕ್ಷನ್ ಬರೋವರೆಗೂ ಮಲ್ಕೊಂಡಿರುತ್ತಾನೆ, ಏಲೆಕ್ಷನ್ ಬಂದ ತಕ್ಷಣ ಎದ್ದು ಬರ್ತಾನೆ. ಈ ಭಾರಿ ಆತನನ್ನ ರಾಜಕೀಯವಾಗಿ ಪರ್ಮನೆಂಟ್ ಆಗಿ ಮಲಗಿಸುತ್ತೇವೆ. ಏಕವಚನದಲ್ಲಿ ಮಾತನಾಡೋದೆ ಅವರ ಮನೆ ಸಂಸ್ಕೃತಿ ಎಂದು ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು.