ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕ ವಿಚಾರವಾಗಿ ಮುನಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದೆ ವಾಪಸಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ನ ದೈನ್ಯಂ, ನ ಪಲಾಯನಂ’ ಎಂದಿದ್ದಾರೆ.
ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ತಮ್ಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇಂದು ಬೆಂಗಳೂರಿನ ಐಟಿಸಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶದ ಬಗ್ಗೆ ಯತ್ನಾಳ್ ಪ್ರಸ್ತಾಪಿಸಿದ್ದಾರೆ. ಈ ವೇಳೆ ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ವೀಕ್ಷಕರು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ತೀರ್ಮಾನ ಒಪ್ಪದೇ ಸಭೆಯಿಂದ ಹೊರನಡೆದಿದ್ದಾರೆ.
ನ ದೈನ್ಯಂ, ನ ಪಲಾಯನಂ 🙏
A warrior cannot complain or regret anything. His life is an endless challenge, and challenges cannot possibly be good or bad. Challenges are simply challenges.
— Basanagouda R Patil (Yatnal) (@BasanagoudaBJP) November 17, 2023