News Karnataka Kannada
Tuesday, April 30 2024
ಬೆಂಗಳೂರು

ʼನ ದೈನ್ಯಂ, ನ ಪಲಾಯನಂʼ: ಶಾಸಕಾಂಗ ಪಕ್ಷದ ಸಭೆಗೆ ಯತ್ನಾಳ್ ಗೈರು, ಟ್ವೀಟ್

Karnataka's victory can only be won by Modi, not by Yappa: Yatnal
Photo Credit : News Kannada

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕ ವಿಚಾರವಾಗಿ ಮುನಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದೆ ವಾಪಸಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ನ ದೈನ್ಯಂ, ನ ಪಲಾಯನಂ’ ಎಂದಿದ್ದಾರೆ.

ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ತಮ್ಮ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶದ ಬಗ್ಗೆ ಯತ್ನಾಳ್ ಪ್ರಸ್ತಾಪಿಸಿದ್ದಾರೆ. ಈ ವೇಳೆ ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ವೀಕ್ಷಕರು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ತೀರ್ಮಾನ ಒಪ್ಪದೇ ಸಭೆಯಿಂದ ಹೊರನಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು