News Karnataka Kannada
Tuesday, April 30 2024
ಬೆಂಗಳೂರು

ಚಹಾ ಮಾರಿಕೊಂಡು ಆದರೂ ಬದುಕಬಹುದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ ಎಂದ ಯತ್ನಾಳ್‌

You can live by selling tea, not by selling your life: Yatnal
Photo Credit : News Kannada

ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ರಾಜ್ಯ ಬಿಜೆಪಿ ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ ಎಂಬ ಕಾಂಗ್ರೆಸ್ ಫೋಸ್ಟ್ ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ಆರೋಪಿಸಿದ ಆ ವಿವೇಕಾನಂದ ಬೇರೆ, “ಹಲೋ ಅಪ್ಪ” ವಿವೇಕಾನಂದ ಬೇರೆ! ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಇದು ಸಿದ್ದರಾಮಯ್ಯ ಅವರನ್ನು ಸಮರ್ಥನೆಯ ಹೇಳಿಕೆಯೋ ಅಥವಾ ಟೀಕೆಯೋ ಗೊತ್ತಿಲ್ಲ. ಇದಕ್ಕೂ ಮುನ್ನ ನ ದೈನ್ಯಂ, ನ ಪಲಾಯನಂ, ಯೋಧ ಎಂದಿಗೂ ದೂರಲಾರ ಅಥವಾ ವಿಷಾದ ವ್ಯಕ್ತಪಡಿಸಲಾರ ಎಂದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು