ರಾಮನಗರ: ಕ್ರಿಸ್ಮಸ್ ಸೇರಿದಂತೆ ಸಾಲು ಸಾಲು ರಜೆಯ ಕಾರಣಕ್ಕೆ ಬೆಂಗಳೂರಿನಿಂದ ರಾಜ್ಯದ ವಿವಿಧ ಟ್ರೆಕ್ಕಿಂಗ್ ತಾಣಗಳಿಗೆ ಚಾರಣ ಹೋಗುವ ಯುವಕರ ಸಂಖ್ಯೆ ಹೆಚ್ಚಿದೆ. ಅದೇ ರೀತಿ ಸ್ನೇಹಿತರ ಜೊತೆ ಚಾರಣಕ್ಕೆ ಬಂದಿದ್ದ ಉತ್ತರ ಪ್ರದೇಶ ಮೂಲದ ಯುವಕ ನಾಪತ್ತೆ ಆಗಿರುವ ಘಟನೆ ಮಾಗಡಿ ತಾಲೂಕು ಸಾವನದುರ್ಗದಲ್ಲಿ ನಡೆದಿದೆ.
ಏಕಶಿಲಾ ಬೆಟ್ಟ ಸಾವನದುರ್ಗ ಚಾರಣಿಗರ ಪಾಲಿಗೆ ಸ್ವರ್ಗವಾಗಿದ್ದು, ಸಾಲು ಸಾಲು ರಜೆ ಇದ್ದ ಕಾರಣ ಭಾನುವಾರ ಸ್ನೇಹಿತನೊಂದಿಗೆ ಉತ್ತರ ಪ್ರದೇಶ ಮೂಲದ ಗಗನ್ದೀಪ್ ಸಿಂಗ್ (30) ಚಾರಣಕ್ಕೆ ಬಂದಿದ್ದಾರೆ. ಈ ವೇಳೆ ನಾಪತ್ತೆಯಾಗಿದ್ದು, ಗಗನ್ ಸ್ನೇಹಿತ ಬೆಟ್ಟದಿಂದ ಇಳಿದು ಬಂದು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ನಾಪತ್ತೆ ಸಂಬಂಧ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಗಗನ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಮೊಬೈಲ್ ಸ್ವಿಚ್ಆಫ್ ಆಗಿದೆ. ಭಾನುವಾರ ಮಧ್ಯಾಹ್ನದಿಂದಲೂ ನಾಪತ್ತೆ ಆಗಿರುವ ಗಗನ್ಗಾಗಿ ಹುಡುಕಾಟ ನಡೆದಿದ್ದು, ಈವರೆಗೂ ಸುಳಿವು ಪತ್ತೆ ಆಗಿಲ್ಲ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…