ನವದೆಹಲಿ: ಕರ್ನಾಟಕ – ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆಯಲ್ಲಿ ಪುನಃ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿದೆ.
ಈಗ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಕರ್ನಾಕದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಇಂದು ಸಿಡಬ್ಲ್ಯುಆರ್ ಸಿ ನಡೆದಿದ್ದು, ಅದರಲ್ಲಿ ಈ ಆದೇಶ ನೀಡಲಾಗಿದೆ. ಕರ್ನಾಟಕದಲ್ಲಿ ಕಾವೇರಿ ನೀರಿನ ಒಳಹರಿವು ಪ್ರಮಾಣದಲ್ಲಿ ಶೇ. 50.89ರಷ್ಟು ಕೊರತೆಯಾಗಿದೆ ಎಂದ ಸಮಿತಿಯು ಬಿಳಿಗಿಂಡ್ಲುವಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಿಳಿಸಿದೆ. ಮುಂದಿನ 15 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ವಾದ ಮಾಡಿತ್ತು.