Bengaluru 22°C
Ad

ಮಹದೇಶ್ವರನ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ: ಓರ್ವ ಸಾವು

ಚೆನ್ನೈನ ವೆಲಚೇರಿಯಲ್ಲಿ ಪತಿ ವಿಚ್ಛೇದನ ನೀಡಲು ಮುಂದಾಗಿರುವುದಕ್ಕೆ ಬೇಸರಗೊಂಡ ಹೆಂಡತಿ ಫ್ಲೈಓವರ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. 

ಚಾಮರಾಜನಗರ: ಹನೂರು  ತಾಲೂಕಿನ ಮಲೆಮಹದೇಶ್ವರ  ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ ಘಟನೆ  ನಡೆದಿದೆ.

ಈ ಘಟನೆಯಲ್ಲಿ  ಓರ್ವ ಮೃತಪಟ್ಟಿದ್ದು, ಮೂವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರನ್ನು ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ನಿವಾಸಿ ಮಹದೇವನಾಯಕ (65)  ಎಂದು ಗುರುತಿಸಲಾಗಿದೆ.

ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ (60), ಲೀಲಾವತಿ (45) ಮತ್ತು ರಿಷಿತಾ (21) ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದೆ ಎಂದು ತಿಳಿದುಬಂದಿದೆ.

ನಾಲ್ವರೂ ಶುಕ್ರವಾರ (ಜೂ.07) ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಇಂದು (ಜೂ.08) ಬೆಳಗ್ಗೆ ಮಹದೇಶ್ವರನ ದರ್ಶನ ಪಡೆದಿದ್ದಾರೆ. ಮಹದೇಶ್ವರನ ದರ್ಶನ ಬಳಿಕ ತಾಳಬೆಟ್ಟಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಅದರಂತೆ ಕುಟುಂಬ ತಾಳಬೆಟ್ಟಕ್ಕೆ ಹೋಗಿದ್ದಾರೆ. ಅಲ್ಲಿ ನಾಲ್ವರೂ ವಿಷ ಸೇವಿಸಿದ್ದಾರೆ. ನಾಲ್ವರಲ್ಲಿ ಮಹದೇವನಾಯಕ ಎಂಬುವರು ಮೃತಪಟ್ಟಿದ್ದಾರೆ.

ಕಾರಣ ಏನು?: K.R.ನಗರ ತಾಲೂಕಿನ ಚೀರನಹಳ್ಳಿಯ ಯುವಕನಿಂದ ಬ್ಲ್ಯಾಕ್​ಮೇಲ್ ಮೃತ ಮಹದೇವನಾಯಕ ಮೊಮ್ಮಗಳನ್ನು‌ ಓರ್ವ ಯುವಕ ಪ್ರೀತಿಸುತ್ತಿದ್ದನು. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಆಕೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕುಟಂಬಸ್ಥರು ಮಾನ ಮರ್ಯಾದೆಗೆ ಅಂಜಿ ಮಹದೇಶ್ವರ ದರ್ಶನ ಪಡೆದು ಬಳಿಕ ತಾಳಬೆಟ್ಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ad
Ad
Nk Channel Final 21 09 2023
Ad