ಚಿಕ್ಕಮಗಳೂರು: ಮಸೀದಿ ಮುಂಭಾಗ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ರಾತ್ರಿ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆ ಶೃಂಗೇರಿ ಪಟ್ಟಣದ ವೆಲ್ಕಮ್ ಗೇಟ್ ಸರ್ಕಲ್​ಗೆ ಬಂದಿದೆ. ಸರ್ಕಲ್​​ನಲ್ಲಿದ್ದ ಮಸೀದಿ ಎದುರುಗಡೆ ಹಿಂದೂ ಕಾರ್ಯಕರ್ತರು ಪಟಾಕಿ ಸಿಡಿಸಿ ಡ್ಯಾನ್ಸ್​ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ​ ಶಾಂತಿ ಭಂಗ, ಭಯದ ವಾತಾವರಣ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.