News Karnataka Kannada
Thursday, May 02 2024
ಕರ್ನಾಟಕ

ಅಧಿಕಾರಿಗಳು ಜನರ ಸೇವಕರಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಿಎಂ ಸಿದ್ದರಾಮಯ್ಯ

ಜನರ ಕಷ್ಟಗಳಿಗೆ ಕಿವಿಯಾಗಿ ಅವರ ಸಮಸ್ಯೆಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ತಮ್ಮ ತೊಂದರೆಗಳೊಂದಿಗೆ ತಹಶೀಲ್ದಾರರ ಕಚೇರಿಗೆ ಬರುವವರ ಸೇವೆ ಮಾಡುವುದಕ್ಕಿಂತ ದೊಡ್ಡ ಪುಣ್ಯದ ಕೆಲಸವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಎ.ಎಸ್‌ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ಜನರ ಕಷ್ಟಗಳಿಗೆ ಕಿವಿಯಾಗಿ ಅವರ ಸಮಸ್ಯೆಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ತಮ್ಮ ತೊಂದರೆಗಳೊಂದಿಗೆ ತಹಶೀಲ್ದಾರರ ಕಚೇರಿಗೆ ಬರುವವರ ಸೇವೆ ಮಾಡುವುದಕ್ಕಿಂತ ದೊಡ್ಡ ಪುಣ್ಯದ ಕೆಲಸವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಎ.ಎಸ್‌ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ೨೦೨೪ನೇ ಸಾಲಿನ ಕ್ಯಾಕೆಂಡರ್ ಮತ್ತು ದಿನಚರಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಧ್ಯವರ್ತಿಗಳ ಹಂಗಿಲ್ಲದೆ ಜನರ ಸೇವೆ ಮಾಡಬೇಕು. ಇದರಿಂದ ಸರ್ಕಾರಕ್ಕೂ ಒಳ್ಳೆಯ ಹೆಸರು. ಸೇವೆಯುದ್ದಕ್ಕೂ ಜನಪರವಾಗಿದ್ದು ಸುಗಮ ಆಡಳಿತವನ್ನು ಒದಗಿಸುವುದು ನಮ್ಮ ಕರ್ತವ್ಯ ಎಂದರು.

ಜನರ ಏಳಿಗೆಯೇ ನಮ್ಮ ಗುರಿಯಾಗಬೇಕು. ದುರ್ಬಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲುವಂತೆ ನೋಡಿಕೊಳ್ಳಬೇಕು. ಸರ್ಕಾರದ ಸವಲತ್ತುಗಳು ಅರ್ಹರಿಗೆ ಸರಿಯಾಗಿ ಸೇರಬೇಕು ಎಂದು ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು