ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಿಎಂ ಸಿದ್ದರಾಮಯ್ಯನವರು ವೇದಿಕೆ ಮೇಲೆ ಮಕ್ಕಳೊಂದಿಗೆ ನಗು ನಗುತ ಚರ್ಚೆ ಮಾಡುತ್ತಿದ್ದದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಸರ್ಕಾರ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲಾಗುತ್ತೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ ಮಾತನಾಡಿದರು.
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ… pic.twitter.com/3Yu7yC8jWn
— CM of Karnataka (@CMofKarnataka) February 22, 2024