ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಈಅI ಮೊದಲು ಅಕ್ಕಿ ನೀಡುವುದಾಗಿ ಹೇಳಿ ಬಳಿಕ ನೀಡಲ್ಲ ಎಂದಿದೆ. ಕೇಂದ್ರದವರು ಕೊಟ್ಟ ಮಾತು ವಾಪಸ್ ಪಡೆದ ಹಿಂದಿನ ಉದ್ದೇಶವೇನು? ದೇಶದ ಜನ ಇದೆಲ್ಲವನ್ನೂ ನೋಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆ ಯಶಸ್ವಿಯಾಗಬಾರದೆಂದು ಹೀಗೆ ಮಾಡ್ತಿದ್ದಾರೆ. ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲು ಸಿಎಂ ನಿರ್ಧಾರ ಕೈಗೊಂಡಿದ್ದಾರೆ. ಬಹುತೇಕ ನಿಗದಿತ ಸಮಯದೊಳಗೆ ಅಕ್ಕಿ ನೀಡುತ್ತೇವೆ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳಲ್ಲೊಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆಯಾಗಿದೆ. ಜೊತೆಗೆ ಶಕ್ತಿ ಯೋಜನೆ ಕೂಡ ಭರ್ಜರಿ ಯಶಸ್ಸು ಕಾಣುತ್ತಿದೆ.