Bengaluru 22°C
Ad

ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ : 11 ಪೊಲೀಸರಿಗೆ ಗಾಯ

ಬಿಪಿ ಲೋ ಆಗಿ ಸಾವನಪ್ಪಿರುವುದಾಗಿ ಎಂದು ಹೇಳಿದ ಪೊಲೀಸರ ವಿರುದ್ಧ ದಂಡೆತ್ತಿಬಂಧ ಸಂಬಂಧಿಕರು ಪೊಲೀಸ್‌ ಠಾನೆಯನ್ನು ದ್ವಂಶ ಗೊಳಿಸುತ್ತಿದ್ದಾರೆ. ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು.

ದಾವಣಗೆರೆ: ಬಿಪಿ ಲೋ ಆಗಿ ಸಾವನಪ್ಪಿರುವುದಾಗಿ ಎಂದು ಹೇಳಿದ ಪೊಲೀಸರ ವಿರುದ್ಧ ದಂಡೆತ್ತಿಬಂಧ ಸಂಬಂಧಿಕರು ಪೊಲೀಸ್‌ ಠಾನೆಯನ್ನು ದ್ವಂಶ ಗೊಳಿಸುತ್ತಿದ್ದಾರೆ. ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್​ನನ್ನು​ ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್​ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್​ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ ಎಂದು ಹೇಳಿದರು.

ಆದರೂ ಕೂಡ ಮೃತನ ಸಂಬಂಧಿಕರು ಲಾಕಪ್‌ಡೆತ್‌ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ‌ಕೂಡ ಸಿಸಿ‌ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ.‌ ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ.‌ ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು‌ ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ‌ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

Ad
Ad
Nk Channel Final 21 09 2023
Ad