ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ರೈತನೋರ್ನ ಸಾಲದ ಬಾಧೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಶಿ ಗ್ರಾಮದಲ್ಲಿ ನಡೆದಿದೆ.
ಸಂಶಿ ಗ್ರಾಮದ ಫಕೀರೇಶ ತಿಪ್ಪಣಾ ಸರಾವರಿ (41) ಸಾಲ ತೀರಿಸಲಾಗದೆ ಮನನೊಂದು ಮನೆಯ ಹಿತ್ತಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಳೆ ಬಾರದೆ ಇರುವುದರಿಂದ ಸ್ಥಳೀಯ ಬ್ಯಾಂಕ್ ಆಫ್ ಬರೋಡ್ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಮೂರು ಲಕ್ಷ ಐವತ್ತು ಸಾವಿರ ಮತ್ತು ಕೈಗಡ ಸಾಲ ಪಡೆದು ತೀರಿಸಲಾಗದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಕವಿತಾ ಸರಾವರಿ ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Ad