ಧಾರವಾಡ : ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟಿಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು ಬಂದಿವೆ. ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೋಮು ಸೌಹಾರ್ದ ಕದಡುವ ಹಾಗೂ ಪುಂಡ ಕಿಡಿಗೇಡಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ನಿಟ್ಟಿನಲ್ಲಿ ಹಾಗೂ ಮತಾಂತರ ಪ್ರಕ್ರಿಯೆ ನಡೆಸಿದ್ದಾರೆ. ಇದನ್ನು ಕಾನೂನು ಪ್ರಕಾರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದರು.
Ad