Categories: ಕರ್ನಾಟಕ

ಮೇಕೆ ಮರಿಗೆ ಹಾಲುಣಿಸುವ ಶ್ವಾನ: ಈ ಮಾತೃತ್ವದ ಪ್ರೀತಿ ನೀವೂ ಕಣ್ತುಂಬಿಕೊಳ್ಳಿ

ದೊಡ್ಡಬಳ್ಳಾಪುರ: ಸಾಕು ಪ್ರಾಣಿಗಳಲ್ಲಿ ನಿಯತ್ತಿನ ಪ್ರಾಣಿ ಎಂದರೆ ನಾಯಿ ಇಲ್ಲೊಂದು ಅಪರೂಪದ ನಾಯಿಯೊಂದು ಕೆಲವು ದಿನಗಳ ಹಿಂದಷ್ಟೇ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಆದರೆ ದುರಾದೃಷ್ಟವಶಾತ್ ಅದರ ಮೇಲೆ ಒಂದು ನಾಯಿ ಮರಿ ಅಸುನೀಗಿತ್ತು. ಉಳಿದೆರಡು ಮರಿಗಳು ಮುದ್ದಾಗಿದ್ದ ಕಾರಣಕ್ಕೆ ಅವುಗಳನ್ನು ಸಾಕಲು ಬೇರೆಯವರು ತೆಗೆದುಕೊಂಡು ಹೋಗಿದ್ದಾರೆ.

ಇದರ ನೋವು ಅರಿತೋ ಏನೋ ವಾರದ ಹಿಂದಷ್ಟೇ ಜನಿಸಿದ ಮೇಕೆ ಮರಿಯೊಂದು ಶ್ವಾನದೊಂದಿಗೆ ಆತ್ಮೀಯತೆಯನ್ನು ಬೆಳೆಸಿಕೊಂಡಿದೆ. ಎಷ್ಟರ ಮಟ್ಟಿಗೆ ಎಂದರೆ ತನ್ನ ಕಂಡು ಓಡೋಡಿ ಬರುವ ಮೇಕೆ ಮರಿಗೆ ಶ್ವಾನವು ಹಾಲುಣಿಸುತ್ತಿದೆ. ಈ ಅಪರೂಪದ ಮಾತೃತ್ವಕ್ಕೆ ಜನರು ನಾಯಿ ಪ್ರೀತಿಗೆ ಮಾರುಹೋಗಿದ್ದಾರೆ.

ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಈ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಗ್ರಾಮದ ಕೃಷ್ಣಪ್ರಸಾದ್ ಎಂಬುವವರ ಮನೆಯ ಶ್ವಾನವು ಮೇಕೆ ಮರಿಗೆ ಹಾಲುಣಿಸುತ್ತಿದೆ.  ಈ  ಮೇಕೆ ಮರಿಯನ್ನು ಕಾಶ್ಮೀರದಿಂದ ಕೃಷ್ಣಪ್ರಸಾದ್ ಅವರು ತೆಗೆದುಕೊಂಡು ಬಂದಿದ್ದಾರೆ. ಈ  ಮೇಕೆ ಮರಿ  ಜನ್ಮ ನೀಡಿದ ತಾಯಿಗಿಂತ ನಾಯಿಯೊಂದಿಗೆ ಹೆಚ್ಚು ಒಡನಾಟವನ್ನು ಹೊಂದಿದೆ. ಶ್ವಾನದ ಮೊಲೆಹಾಲು ಕುಡಿಯುವ ಮೇಕೆ ಮರಿಯನ್ನು ನೋಡುವುದೇ ಜನರಿಗೆ ಆಶ್ಚರ್ಯದ ಸಂಗತಿಯಾಗಿದೆ. ಇಷ್ಟೇ ಅಲ್ಲ ದೊಡ್ಡಿಯಲ್ಲಿರುವ ಮೇಕೆಗಳ ಕಾವಲು ಕೂಡಾ ಈ ಶ್ವಾನವೇ ಕಾಯುತ್ತದೆ. ಯಾರೇ ಅಪರಿಚಿತರು ಬಂದರೂ ಮೇಕೆಗಳನ್ನು ಮುಟ್ಟಲು ಬಿಡುವುದಿಲ್ಲ ಅಂತೆ. ಮೇಕೆಮರಿ ಮತ್ತು ಶ್ವಾನದ ವಾತ್ಸಲ್ಯವು ಮುಂದುವರಿದಿದೆ.

Ashitha S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

16 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

17 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

21 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

32 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

37 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

52 mins ago