Bengaluru 28°C
Ad

ಪೊಲೀಸರ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಿಡಿಸಿಕೊಂಡು ಹೋದ ದುಷ್ಕರ್ಮಿಗಳು

ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ.

392 ಕೇಸ್‌ನಲ್ಲಿ ಆರೋಪಿ ಅಮ್ಜದ್ ಅಲಿ ಗಂಗಾವತಿ ಶಹರ ಪೊಲೀಸರಿಗೆ ಬೇಕಿದ್ದ. ಈ ವೇಳೆ ಬಂದ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿಯನ್ನು ಬಿಡಿಸಿಕೊಂಡು ಹೋಗಿದ್ದಾರೆ.

ದುಷ್ಕರ್ಮಿಗಳು ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ, ಡಿವೈಎಸ್ಪಿ ಭೇಟಿ ನೀಡಿ ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.

 

 

Ad
Ad
Nk Channel Final 21 09 2023
Ad