News Karnataka Kannada
Thursday, May 09 2024
ಕರ್ನಾಟಕ

ನಾಡಿನೆಲ್ಲೆಡೆ ಇಂದು ಗಣೇಶ ಹಬ್ಬದ ಸಂಭ್ರಮ

Ganesha
Photo Credit : News Kannada

ಹಿಂದೂ ಧರ್ಮೀಯರ ಪವಿತ್ರ ದೊಡ್ಡ ಹಬ್ಬ ಗೌರಿ-ಗಣೇಶ ಚತುರ್ಥಿಯನ್ನು ಇಂದು ನಾಡಿನೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಗಣೇಶ ಚತುರ್ದಶಿ, ವಿನಾಯಕ ಚತುರ್ದಶಿ ಅಥವಾ ಗಣೇಶ ಚತುರ್ಥಿ ಎಂದು ಕರೆಯಲ್ಪಡುವ ಈ ಹಬ್ಬವು ದೇಶದ ಪ್ರಮುಖ ರಜಾದಿನಗಳಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಭಾರತವು ಈ ಹಬ್ಬವನ್ನು ಅತ್ಯಂತ ವೈಭವದಿಂದ ಮತ್ತು ಉತ್ಸಾಹದಿಂದ ಆಚರಿಸುತ್ತದೆ.

ಮುಂಜಾನೆಯೇ ಮನೆಯಲ್ಲಿ ಹೆಂಗಳೆಯರು ಮಕ್ಕಳು ಎದ್ದು ಮನೆ ಮುಂದೆ ಸಾರಿಸಿ ರಂಗೋಲಿ ಬಳಿದು ತೋರಣ ಕಟ್ಟಿ ಹಬ್ಬವನ್ನು ಸ್ವಾಗತಿಸುತ್ತಿದ್ದಾರೆ. ಬೆಳಗ್ಗೆಯೇ ಸ್ನಾನ ಮಾಡಿ ದೇವರ ಮನೆಯಲ್ಲಿ ಗಣೇಶ ಮೂರ್ತಿ ಇಟ್ಟು ಅಲಂಕಾರ ಮಾಡಿ, ನೈವೇದ್ಯ ಮಾಡಿ ಗೌರಿ-ಗಣೇಶ ಸ್ತೋತ್ರ, ದೇವರ ನಾಮ, ಅಷ್ಟೋತ್ತರಗಳನ್ನು ಮನೆಯವರೆಲ್ಲಾ ಸೇರಿ ಹೇಳಿ ಭಕ್ತಿಯಿಂದ ಪೂಜೆ ಮಾಡುತ್ತಿದ್ದಾರೆ.

ಈ ವರ್ಷ, ಇದು ಸೆಪ್ಟೆಂಬರ್ 19 ರಿಂದ 28 ರವರೆಗೆ ನಡೆಯಲಿದೆ. ಕೆಲವೆಡೆ ಸೆಪ್ಟೆಂಬರ್‌ 18 ರಂದು ಕೂಡ ಆಚರಿಸುತ್ತಾರೆ. ಹತ್ತು ದಿನಗಳ ಕಾಲ ನಡೆಯುವ ಈ ಹಬ್ಬವು ಗಣೇಶನ ಜನ್ಮವನ್ನು ಸುಂದರವಾಗಿ ಸ್ಮರಿಸುತ್ತದೆ ಮತ್ತು ಜನರು ಬುದ್ಧಿವಂತಿಕೆ, ಸಮೃದ್ಧಿ, ಅದೃಷ್ಟ ಮತ್ತು ಶುಭ ಫಲಕ್ಕಾಗಿ ಗಣೇಶನ ಆಶೀರ್ವಾದವನ್ನು ಕೋರಿ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ.

ಗಣೇಶ ಚತುರ್ಥಿಯು ಮಹಾರಾಷ್ಟ್ರದಲ್ಲಿ 12 ನೇ ಶತಮಾನದಲ್ಲಿ ಹುಟ್ಟಿಕೊಂಡಿದೆ ಎನ್ನುವ ನಂಬಿಕೆಯಿದೆ. ಈ ಹಬ್ಬವನ್ನು ಮರಾಠ ರಾಜ ಶಿವಾಜಿ ಮಹಾರಾಜರು ಜನಪ್ರಿಯಗೊಳಿಸಿದರು ಎನ್ನಲಾಗುತ್ತದೆ.

ಬುದ್ಧಿವಂತಿಕೆ, ಸಮೃದ್ಧಿ ಮತ್ತು ಅದೃಷ್ಟದ ದೇವರಾದ ಆನೆಯ ತಲೆಯುಳ್ಳ ಗಣೇಶನ ಜನ್ಮವನ್ನು ಗುರುತಿಸಲು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಗಣೇಶನು ಅಡೆತಡೆಗಳನ್ನು ನಿವಾರಿಸುತ್ತಾನೆ ಮತ್ತು ಅದೃಷ್ಟವನ್ನು ತರುತ್ತಾನೆ. ಈ ಹಬ್ಬವು ಹಿಂದೂಗಳು ಒಗ್ಗೂಡಲು ಹಾಗೂ ಅವರ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸಲು ಉತ್ತಮ ದಿನವಾಗಿದೆ.

ಅಕಾಲಿಕ ಮಳೆಯಿಂದ ಹಬ್ಬಕ್ಕೂ ಕೊಂಚ ಎಫೆಕ್ಟ್ ತಟ್ಟಿದ್ದು ಹೂ-ಹಣ್ಣುಗಳ ದರ ನಿಯಮಿತವಾಗಿ ಏರಿಕೆಯಾಗಿದೆ. ಹೂ-ಹಣ್ಣು, ಎಕ್ಕದ ಹೂ ಹಾರ, ಗರಿಕೆಗೆ ಭಾರೀ ಬೇಡಿಕೆಯಿದ್ದು, ಖರೀದಿಸಲು ಬಂದವರಿಗೆ ಹೂ-ಹಣ್ಣಿನ ಸ್ವಲ್ಪ ಮಟ್ಟಿನ ದರ ಹೆಚ್ಚಳದಿಂದ ಕೊಂಚ ಬೇಸರವಾದರೂ, ಹಬ್ಬಕ್ಕೆ ಭರ್ಜರಿಯಾಗೇ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು