News Karnataka Kannada
Saturday, May 04 2024
ಕರ್ನಾಟಕ

ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ; ಹೆಚ್.ಡಿ.ದೇವೇಗೌಡ

ಪತ್ರಿಕೆಗಳಲ್ಲಿ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಜಾಹಿರಾತಿಗೆ ಹಣ ಪೋಲು ಮಾಡುವ ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.
Photo Credit : NewsKarnataka

ಹೊಳೆನರಸೀಪುರ: ಪತ್ರಿಕೆಗಳಲ್ಲಿ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಜಾಹಿರಾತಿಗೆ ಹಣ ಪೋಲು ಮಾಡುವ ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

ಹೊಳೆನರಸೀಪುರದ ಬಾಗಿವಾಳು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ೨೬ನೇ ತಾರೀಕು ನಡೆಯುವ ಲೋಕಸಭೆಯ ಚುನಾವಣೆಯಲ್ಲಿ ನಮ್ಮ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು.

ಮುಂದೆ ಈ ದೇಶದ ಪ್ರಧಾನಮಂತ್ರಿಯಾಗುವ ಶ್ರೀ ನರೇಂದ್ರ ಮೋದಿ ಅವರನ್ನು ನಾವೆಲ್ಲರೂ ಬೆಂಬಲಿಸಬೇಕು. ನರೇಂದ್ರ ಮೋದಿಗೆ ಬೆಂಬಲ ಸಿಗಬೇಕು ಎಂದರೆ ನೀವೆಲ್ಲರೂ ಮತದಾರ ಬಂಧುಗಳು, ತಂದೆ ತಾಯಿಯಂದಿರು ಯುವಕರು ಪ್ರಜ್ವಲ್ ರೇವಣ್ಣ ಅವರನ್ನು ಚುನಾ ಯಿಸಿ ಗೆಲ್ಲಿಸಿ ಎಂದರು.

ಈ ಸಂದರ್ಭದಲ್ಲಿ ದೇವೇಗೌಡರು ರಾಜ್ಯದ ಉಪಮುಖ್ಯಮಂತ್ರಿಯಾಗಿರುವವರು ಸುಮಾರು ಐದು ರಾಜ್ಯಗಳ ಚುನಾವಣೆಗೆ ಬೆಂಗಳೂರಿನಿಂದ ಹಣವಸೂಲು ಮಾಡುತ್ತಿದ್ದಾರೆ ಎಂದು ಕುಟುಕಿದರು. ಕಾರ್ಯಕ್ರಮದಲ್ಲಿ ಸಾವಿರಾರು ನಾಗರಿಕರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು