ಹಾಸನ: ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ.
ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಸೂರಜ್ನನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಆದರೆ, ಮತ್ತೊಂದೆಡೆ ಸೂರಜ್ ಪರ, ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ಪರಾರಿಯಾಗಿರುವುದು ಕಂಡುಬಂದಿದೆ.
ದೂರು ನೀಡಿದ ಬಳಿಕ ಹೊಳೆನರಸೀಪುರ ಠಾಣೆಯಿಂದ ಸೂರಜ್ ಆಪ್ತ ಶಿವಕುಮಾರ್ ಓಡಿಹೋಗಿದ್ದಾನೆ ಎನ್ನಲಾಗಿದೆ.ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆ ನಾಪತ್ತೆಯಾಗಿದ್ದಾನೆ. ಸಂತ್ರಸ್ತನ ವಿರುದ್ಧ ಶಿವಕುಮಾರ್ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹೋಗಿಯೇ ಸೂರಜ್ ರೇವಣ್ಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
Ad