News Karnataka Kannada
Tuesday, April 30 2024
ಕರ್ನಾಟಕ

ಕೈ ಮುಗಿತೀನಿ. . . ಎನ್ನುತ ರಾಜ್ಯಸಭೆಯಲ್ಲಿ ಕರ್ನಾಟಕಕ್ಕಾಗಿ ಹೆಚ್​.ಡಿ.ಡಿ ಹೋರಾಟ

Hdd
Photo Credit : News Kannada

ಬೆಂಗಳೂರು: ಕಾವೇರಿ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತೆ ಧ್ವನಿ ಎತ್ತಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ತಮಿಳುನಾಡು ಸಂಸದರು ಅಪಸ್ವರ ಎತ್ತಿದ್ದಾರೆ.

ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕಾವೇರಿ ಕಾದಾಟ ಮುಂದುವರಿಯತ್ತಲೇ ಇದೆ. ರಾಜ್ಯದ ಜನರಿಗೆ ಕುಡಿಯಲು ನೀರು ಇಲ್ಲ ಅಂದ್ರೂ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಆಜ್ಞೆಗೆ ಕರುನಾಡಿನ ಡ್ಯಾಮ್​ಗಳಿಂದ ಟಿಎಂಸಿಗಳ ಮೇಲೆ ಟಿಎಂಸಿಗಳಷ್ಟು ನೀರನ್ನ ಹರಿ ಬಿಡಬೇಕಾದ ಪರಿಸ್ಥಿತಿ ಇದೆ. ಇದಕ್ಕೆ ಒಂದು ರೀತಿಯ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ. ಈ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಮೇಕೆದಾಟು ಮಹಾಯುದ್ಧವೇ ನಡೆಯುತ್ತಿದೆ. ರಾಜ್ಯದಲ್ಲಿ ನೀರಿನ ಪರಿಸ್ಥಿತಿ ಕುರಿತು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಧ್ವನಿ ಎತ್ತಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಭಾಗಿಯಾದ್ದ ದೇವೇಗೌಡರು, ಮೇಕೆದಾಟು ಯೋಜನೆ ವಿಚಾರ ಪ್ರಸ್ತಾಪಿಸಿದ್ರು. ಕರ್ನಾಟಕದಲ್ಲಿ ಕುಡಿಯುವ ನೀರಿನ ಪ್ರಮುಖ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರವು ಕೇವಲ 30 ಟಿಎಂಸಿ ನೀರಿನ ಅಣೆಕಟ್ಟನ್ನು ನಿರ್ಮಿಸಲು ಅನುಮತಿ ನೀಡಬೇಕೆಂದು ನಾನು ಪ್ರಧಾನಿ ಹಾಗೂ ನಮ್ಮ ತಮಿಳುನಾಡು ಸ್ನೇಹಿತರಲ್ಲಿ ಮನವಿ ಮಾಡುತ್ತೇನೆ ಅಂತ ಕೈ ಮುಗಿದು ಮನವಿ ಮಾಡಿಕೊಂಡ್ರು.

ನಾನು 60 ವರ್ಷಗಳಿಂದ ಇದಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ನನಗೆ 91 ವಯಸ್ಸು. 10 ವರ್ಷದಲ್ಲಿ 4 ವರ್ಷಗಳು ಮಾತ್ರ ಸಮಸ್ಯೆ ಇರುತ್ತೆ. ಪ್ರಧಾನಿ ಮಂತ್ರಿಗಳ ಬಳಿ ಮನವಿ ಮಾಡುತ್ತೇನೆ. ಈ ಸಮಸ್ಯೆಯನ್ನ ಆಲಿಸಿ, ಏನಾದ್ರು ಮಾಡಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನ ಬಗೆಹರಿಸಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ ಹೆಚ್​​ಡಿಡಿ. ಆದ್ರೆ ಇದಕ್ಕೆ ತಮಿಳುನಾಡು ಅಪಸ್ವರ ಎತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು