ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲೂ ಮಳೆಯಾಗಲಿದೆ.

ಆಗುಂಬೆ, ಭಾಗಮಂಡಲ, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿ, ಜಯಪುರ, ಕ್ಯಾಸಲ್​ರಾಕ್, ಗೇರುಸೊಪ್ಪ, ಸಿದ್ದಾಪುರ, ಕಳಸ, ಲಿಂಗನಮಕ್ಕಿ, ಕೊಪ್ಪ, ಸೋಮವಾರಪೇಟೆ, ಮಂಕಿ, ಹೊನ್ನಾವರ, ಕೋಟ, ಗೋಕರ್ಣ, ಪೊನ್ನಂಪೇಟೆ, ನಾಪೊಕ್ಲು, ಶಿರಾಲಿ, ಅಂಕೋಲಾ, ಕಾರ್ಕಳದಲ್ಲಿ ಮಳೆಯಾಗಿದೆ.