ಯಾದಗಿರಿ: ಕಳೆದ ಮೂರು ದಿನಗಳಿಂದ ಯಾದಗಿರಿ ಜಿಲ್ಲೆಯಾದ್ಯಂತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 21) ಯಾದಗಿರಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ, ಅನುದಾನ ರಹಿತ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇಂದಿನ ಬದಲಿಗೆ ಭಾನುವಾರ ಶಾಲೆಗಳ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಶಿವಮೊಗ್ಗದಲ್ಲೂ ಸಹ ಭಾರಿ ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಪಟ್ಟಣದ ವಾಗ್ದೇವಿ, ಸೆಂಟ್ ಮೇರಿಸ್ ಹಾಗೂ ಸಹ್ಯಾದ್ರಿ ಶಾಲೆಗಳಿಗೆ ಇಂದು ರಜೆ ನೀಡಿ ಬಿಇಒ ಗಣೇಶ್ ಆದೇಶ ಹೊರಡಿಸಿದ್ದಾರೆ. ಉಳಿದ ಶಾಲೆಗಳಿಗೆ ಪರಿಸ್ಥಿತಿ ನೋಡಿ ರಜೆ ನೀಡುವಂತೆ ಸೂಚನೆ ನೀಡಿದ್ದಾರೆ.