ಕಲಬುರಗಿ: ಚಾಕುವಿನಿಂದ ಇರಿದು ಆಟೋ ಚಾಲಕನ ಬರ್ಬರ ಹತ್ಯೆ ನಡೆಸಲಾಗಿದೆ. ಗೋಪಾಲ್ ಜಾಧವ್ (48) ಮೃತಪಟ್ಟವನು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ತಡರಾತ್ರಿ ತನ್ನ ಜಮೀನಿಗೆ ತೆರಳಿದ್ದ ಗೋಪಾಲ್ ಮೇಲೆ ಎರಗಿದ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ.ಚಾಕುವಿನಿಂದ ಇರಿದು ಕೊಂದ ಬಳಿಕ ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿ ಪರಾರಿ ಆಗಿದ್ದಾರೆ. ಈ ವೇಳೆ ಮರಕ್ಕೆ ಮೃತದೇಹವನ್ನು ಕಟ್ಟಿದ್ದ ಹಗ್ಗ ಕಟ್ ಆಗಿ ಬಿದ್ದಿದೆ.
ಜಮೀನಿನಲ್ಲಿ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಚಾವರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ.
Ad