ಕಲಬುರಗಿ: ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ಅವರು ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಬೇರೆ ದೇಶದವರು ಯಾರಾದರೂ ಕರೆಯುತ್ತಿದ್ದರಾ ಎಂದು ಪ್ರಶ್ನಿಸಿದರು.
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಡೀ ದೇಶ ತಕ್ಕ ಪಾಠ ಕಲಿಸಿದೆ. 120 ವಷ೯ದ ಪಕ್ಷ, 20 ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ ಎಂದರು.
ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಹೋಗಿ, ಪ್ರಾಧೇಶಿಕ ಪಕ್ಷವಾಗಿ ಹೊರಹೊಮ್ಮುತ್ತಿದೆ. ಲಾಲು ಪ್ರಸಾದ್ ಯಾದವ ಅಥವಾ ಬೇರೆ ಯಾವದಾದರೂ ಪಕ್ಷದ ಜೊತೆಗೆ ಕಾಂಗ್ರೆಸ್ ಸೇರಿಕೊಳ್ಳಲಿ ಎಂದರು.
ಕಾಂಗ್ರೆಸ್ ಪಕ್ಷವೇ ಅಡಾಕ್ ಪಕ್ಷವಾಗಿದೆ. ಈಗೇನಿದ್ದರೂ ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ ಪಕ್ಷದವರು ಮೊದಲು ತಮ್ಮ ಮನೆಯನ್ನೇ ತೊಳೆದುಕೊಳ್ಳಲು ಆಗಲಿಲ್ಲ. ಬೇರೆಯವರ ಮನೆ ಬಗ್ಗೆ ಮಾತನಾಡುತ್ತಾರೆ ಎಂದರು.
ಉಗ್ರಪ್ಪಾ, ಸಲೀಂ ಅಹ್ಮದ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ, ನ್ನು ಸೈಡ್ ಲೈನ್ ಮಾಡುವುದಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಕುತಂತ್ರ ರಾಜಕೀಯಕ್ಕೆ ಹೆಸರುವಾಸಿಯಾಗಿದೆ ಎಂದರು.
ರಾಹುಲ್ ಗಾಂಧಿ ಡ್ರಗ್ ಫೆಡ್ಲರ್ ನಳಿನ್ ಕುಮಾರ್ ಕಟಿಲ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಟಿಲ್ ಆವರು ಎನೂ ಹೇಳಿದ್ದಾರೆ,ನನಗೆ ಗೊತ್ತಿಲ್ಲ. ಆದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.