ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ 24 ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ರೈತ ಅಮೃತಪ್ಪಾ ಬಿಚ್ಚಪ್ಪಾ ಎಂಬುವವರಿಗೆ ಸೇರಿರುವ ದನದ ಕೊಟ್ಟಿಗೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ 20 ಹಸುಗಳು, 4 ಕರುಗಳು ಸೇರಿದಂತೆ 24 ಜಾನುವಾರುಗಳ ಪರಿಸ್ಥಿತಿ ಗಂಭೀರವಾಗಿದೆ.
ಸ್ಥಳೀಯರ ಸಹಾಯದಿಂದ ದುಷ್ಕರ್ಮಿಗಳು ಹಚ್ಚಿದ ಬೆಂಕಿಯನ್ನು ನಂದಿಸಲಾಗಿದೆ. ಕುಂಚಾವರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.