ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ನಲ್ಲಿದ್ದ ಏಳು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.
ಟೆಂಪೋ ಟ್ರಾಕ್ಸ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದ ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. 35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಗಾಯಾಳುಗಳನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಣ್ಣೆದುರಿಗೆ ಸುಟ್ಟು ಭಸ್ಮವಾದಂತ ತಮ್ಮವರನ್ನು ಕಂಡ ಬಸ್ ನಲ್ಲಿದ್ದಂತ ಸಂಬಂಧಿಕರು, ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತದಲ್ಲಿ 12 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಒಟ್ಟಾರೆ 7 ಮಂದಿ ಈ ದುರಂತದಲ್ಲಿ ಸಜೀವವಾಗಿ ಧಹಿಸಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.