Categories: ಕಲಬುರಗಿ

ಕಲಬುರಗಿ: ಬಸ್ಸಿಗೆ ಬೆಂಕಿ ತಗುಲಿ 7 ಜನ ಸಜೀವ ದಹನ

ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ನಲ್ಲಿದ್ದ ಏಳು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.

ಟೆಂಪೋ ಟ್ರಾಕ್ಸ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದ ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. 35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಗಾಯಾಳುಗಳನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಣ್ಣೆದುರಿಗೆ ಸುಟ್ಟು ಭಸ್ಮವಾದಂತ ತಮ್ಮವರನ್ನು ಕಂಡ ಬಸ್ ನಲ್ಲಿದ್ದಂತ ಸಂಬಂಧಿಕರು, ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತದಲ್ಲಿ 12 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಒಟ್ಟಾರೆ 7 ಮಂದಿ ಈ ದುರಂತದಲ್ಲಿ ಸಜೀವವಾಗಿ ಧಹಿಸಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

4 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

20 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

45 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago