News Karnataka Kannada
Thursday, May 02 2024
ಕಲಬುರಗಿ

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ

Kalyana 17092021
Photo Credit :

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಬಳಿಕ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಮೇಳಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಕೋವಿಡ್ ವಾರಿಯರ್ ಗಳಿಗೆ ಸನ್ಮಾನಿಸಲಾಯಿತು. ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪುತ್ಹಳಿಗೆ ಮಾಲಾರ್ಪಣೆ, ನಂತರ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಲಾಗುತ್ತಿರುವ 1500 ಕೋಟಿ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 1500 ಕೋಟಿ ನೀಡಲಾಗುವುದು ಎಂದು ಘೋಷಿಸಿದರು.

ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 8 ಸಾವಿರ ಕೋಟಿ ಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ಪೈಕಿ 6 ಸಾವಿರ ಕೋಟಿ ಖರ್ಚಾಗಿದೆ. ಉಳಿದ 2 ಸಾವಿರ ಕೋಟಿಯನ್ನು ಬರುವ ಮಾರ್ಚ್ ನೊಳಗೆ ಖರ್ಚು ಮಾಡಬೇಕು, ಅಂದಾಗ ಮಾತ್ರ ಹೆಚ್ಚುವರಿ 1500 ಕೋಟಿ ಬಿಡುಗಡೆ ಮಾಡುವುದಾಗಿ ಷರತ್ತು ವಿಧಿಸಿದರು.

ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು, ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು