ಕಲಬುರಗಿ: 2019ರ ಲೋಕಸಭಾ ಚುನಾವಣೆಯಲ್ಲಿ ಜನರಿಂದಲ್ಲ, ಬಿಜೆಪಿ-ಆರ್’ಎಸ್ಎಸ್ ಪಿತೂರಿಯಿಂದ ಸೋಲಾಗಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದ್ದಾರೆ.
ನಗರದ ಜೈಭವಾನಿ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಸಿದ್ದ ಅಭಿನಂದನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸತತ 11 ಬಾರಿ ಚುನಾವಣೆ ಗೆದ್ದ ತಮಗೆ 12ನೇ ಚುನಾವಣೆಯಲ್ಲಿ ಸೋಲಾಯ್ತು. ಈ ಸೋಲಿಗೆ ಕಲಬುರಗಿ ಜನ ಕಾರಣರಲ್ಲ. ಮೋದಿ, ಶಾ ಹಾಗೂ ಆರ್’ಎಸ್ಎಸ್ ಕುತತಂತ್ರದಿಂದ ಸೋಲಾಯಿತು ಎಂದು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಕಿಡಿಕಾರಿದ್ದಾರೆ.