ಕಲಬುರಗಿ: 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ಗಳನ್ನೂ ನೀಡಿ ಭಾರತ ವಿಶ್ವ ದಾಖಲೆ ಮಾಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಲಬುರಗಿ ಬಿಜೆಪಿ ಉತ್ತರ ಮಂಡಲದಲ್ಲಿರುವ ದುಬೈ ಕಾಲೊನಿಯ ಯುನಾನಿ ಆಸ್ಪತ್ರೆಯಲ್ಲಿ
ಈ ದೊಡ್ಡ ಲಸಿಕಾ ಅಭಿಯಾನಕ್ಕೆ ಶ್ರಮಿಸಿದ ವೈದ್ಯಕೀಯ ತಂಡಕ್ಕೆ,ಸ್ಟಾಫ್ ನರ್ಸಗಳಿಗೆ,ಆಶಾ ಕಾರ್ಯಕರ್ತರಿಗೆ ಎಲ್ಲಾ ಕೋವಿಡ್ ವಾರಿಯರ್ಸ್ಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾಯ೯ಕ್ರಮದಲ್ಲಿ ಮಾತನಾಡಿದ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್, ಇಡೀ ವಿಶ್ವದಲ್ಲಿಯೇ ಒಂದು ನೂರು ಕೋಟಿ ಭಾರತೀಯರಿಗೆ ಉಚಿತವಾಗಿ ಕೋವಿಡ ಲಸಿಕೆ ನೀಡುವುದರೊಂದಿಗೆ ವಿಶ್ವದಾಖಲೆ ಬರೆದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರಿಗೆ ಧನ್ಯವಾದಗಳನ್ನು ಅರ್ಪಿಸಬೇಕೆಂದರು.
ಅದರಂತೆ ಈ ವಿಶೇಷ ಅಭಿಯಾನದಲ್ಲಿ ಸತತವಾಗಿ ಸೇವೆ ಸಲ್ಲಿಸಿದ ವೈದ್ಯರು ಹಾಗೂ ನಸ೯ಗಳಿಗೆ, ಆಶಾ ಕಾಯ೯ಕತೆ೯ಯರಿಗೆ ಮತ್ತು ಇನ್ನೀತರ ವಾರಿಯರ್ಸ್ ಗೆ ಅಭಿನಂದನೆಗಳು ಸಲ್ಲಿಸುವ ಸಮಯ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ,ಬಿಜೆಪಿ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ,ವೈದ್ಯರಾದ
ಡಾ.ಸಂಧ್ಯಾರಾಣಿ,ಮಹಾನಗರ ಪಾಲಿಕೆಯ ಸದಸ್ಯರು,ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…