News Karnataka Kannada
Sunday, May 05 2024
ಕಲಬುರಗಿ

ಮಕ್ಕಳ ಮೈ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ದುಷ್ಕರ್ಮಿಗೆ ಶಿಕ್ಷೆ

Punishment , Court
Photo Credit :

ಕಲಬುರಗಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಕರೆದು ಮೈಮೇಲೆ ಬಿಸಿ ಎಣ್ಣೆ ಸುರಿಯುವ ಮೂಲಕ ವಿಕೃತಿ ಮೆರೆದಿದ್ದ ಮಹಿಳೆಗೆ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಆನಂದನಗರ ಬಡಾವಣೆಯ ನಿವಾಸಿ ಶ್ರೀದೇವಿ ಕೋರವಾರ (57) ಶಿಕ್ಷೆಗೆ ಗುರಿಯಾದ ಮಹಿಳೆ. 2019 ರಲ್ಲಿ ಮನೆ ಅಂಗಳದಲ್ಲಿ ಆಟವಾಡಿಕೊಂಡಿದ್ದ ಅಹನಾ ಮತ್ತು ಪಾರ್ವತಿ ಎಂಬ ಇಬ್ಬರು ಮಕ್ಕಳನ್ನು ಕರೆದು ಚಾಕೋಲೆಟ್ ಕೊಡುವುದಾಗಿ ನಂಬಿಸಿ, ಮನೆ ಒಳಗೆ ಕರೆದುಕೊಂಡು ಹೋಗಿ ಬಿಸಿ ಅಡುಗೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಳು. ಪರಿಣಾಮ ಓರ್ವ ಬಾಲಕಿಯ ಹಣೆ, ಎದೆ ಹಾಗೂ ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಇನ್ನೋರ್ವ ಬಾಲಕಿಯ ಕೈಬೆರಳುಗಳು ಸುಟ್ಟು ಹೋಗಿದ್ದವು. ಅಕ್ಕಪಕ್ಕದ ಮನೆಯವರ ಜೊತೆ ನಡೆದ ಗಲಾಟೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮಕ್ಕಳ ಮೇಲೆ ಸೇಡು ತೀರಿಸಿಕೊಳ್ಳುಲು ಪ್ರಯತ್ನಿಸಿದ್ದಳು.ಈ ಸಂಬಂಧ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶುಕ್ಲಾಕ್ಷ್ ಪಾಲನ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು