ಕಲಬುರಗಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿಯೇ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಭಟನೆ ಮಾಡಿದ್ದಾರೆ. ಜಿಲ್ಲೆಯ ಸೇಡಂ ತಾಲೂಕಿನ ಮುಧೋಳ ಗ್ರಾಮಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ,ಹೀಗಾಗಿ ಸೂಕ್ತ ಬಸ್,ವ್ಯವಸ್ಥೆ ಕಲ್ಪಿಸುವಂತೆ ಬಸ್ ನಿಲ್ದಾಣದಲ್ಲಿ ವಿಧ್ಯಾರ್ಥಿನಿ ಯರು ಪ್ರತಿಭಟನೆ ಮಾಡಿದ್ದಾರೆ.
ವಿದ್ಯಾರ್ಥಿ ಗಳಿಗೆ ಶಾಲಾ ಕಾಲೇಜು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಬಸ್ ವ್ಯವಸ್ಥೆ ಮಾಡಬೇಕೆಂದು ಬಸ್ ಎದುರಿಗೆ ನಿಂತು ಪ್ರತಿಭಟನೆ ಮಾಡಿದ್ದಾರೆ. ಕಲ್ಯಾಣ ಕನಾ೯ಟಕ ಸಾರಿಗೆ ಅಧ್ಯಕ್ಷರ ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ವಿಧ್ಯಾರ್ಥಿನಿ ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.