News Karnataka Kannada
Monday, April 29 2024
ಕಲಬುರಗಿ

ಹನುಮಾನ್ ಚಾಲೀಸಾ ಪಠಣ : ಇಪ್ಪತ್ತಕ್ಕೂ ಅಧಿಕ ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನ

Untitled 157
Photo Credit :

ಕಲಬುರಗಿ: ಆಜಾನ್ ವಿರುದ್ಧ ಶ್ರೀರಾಮ‌ ಸೇನೆ ಕರೆ ನೀಡಿದ ಸುಪ್ರಭಾತ ಅಭಿಯಾನಕ್ಕೆ ವಿರೋಧ ವ್ಯಕ್ತವಾಗಿದ್ದು, ಹನುಮಾನ್ ಚಾಲೀಸಾ ಪಠಣ ಮಾಡುತ್ತಾ ತೆರಳುತ್ತಿರುವ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಪ್ರಭಾತ ಹಾಕಿದ ಶ್ರೀರಾಮ ಸೇನೆ ಕಾರ್ಯಕರ್ತರು, ಮಧ್ಯಾಹ್ನ ಹನುಮಾನ್​ ಚಾಲೀಸಾ​ ಪಠಣಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಜಗತ್ ವೃತ್ತದಿಂದ ಸೂಪರ್ ಮಾರ್ಕೆಟ್​ವರೆಗೆ ಪಾದಯಾತ್ರೆ ಮೂಲಕ ತೆರಳಿ ಅಲ್ಲಿರುವ ಹನುಮಾನ್​ ದೇವಸ್ಥಾನದಲ್ಲಿ ಹನುಮಾನ್​​ ಚಾಲೀಸಾ ಪಠಣಕ್ಕೆ ಮುಂದಾಗಿದ್ದರು.

ಇನ್ನು ಮುಸ್ಲಿಂ ಸಮುದಾಯಕ್ಕೆ ದಲಿತ ಸಂಘಟನೆಗಳು, ಜೆಡಿಎಸ್ ಕಾರ್ಯಕರ್ತರು ಬೆನ್ನೆಲುಬಾಗಿ ನಿಂತಿದ್ದು, ಹನುಮಾನ್​​ ಚಾಲೀಸಾ ಪಠಣ ಮಾಡುತ್ತಾ ಹೊರಟ 20ಕ್ಕೂ ಅಧಿಕ ಜನ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು