ಕಲಬುರಗಿ : ಯಾವುದೇ ಕಾರಣಕ್ಕೂ ನಾನು ಹುದ್ದೆಯನ್ನ ಅರಸಿ ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು ನಾನು ಹುದ್ದೆಯನ್ನ ಹುಡುಕಿಕೊಂಡು ಹೋಗುವುದಿಲ್ಲ. ನನ್ನ ತಂದೆ ಯಡಿಯೂರಪ್ಪನವರು ರಾಜ್ಯದಲ್ಲಿ ಸೈಕಲ್ ಮೇಲೆ ಓಡಾಡಿ ಪಕ್ಷ ಕಟ್ಟಿದ್ದಾರೆ. ರಾಜ್ಯದ ಜನ ಅವರ ಹೋರಾಟ ಗುರುತಿಸಿ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ ಎಂದರು.
ಪಕ್ಷದ ವರಿಷ್ಟರು ಯಾವುದೇ ಸ್ಥಾನಮಾನ ಕೊಟ್ಟರು ಅದನ್ನ ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುತ್ತೇನೆ. ಸಿಎಂ ಬೊಮ್ಮಾಯಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ಹೋಗುತ್ತಾರೆ. ಆನಂದ್ ಸಿಂಗ್ ಸೇರಿದಂತೆ 17 ಜನ ಕಾಂಗ್ರೆಸ್ ಜೆಡಿಎಸ್ ತ್ಯಜಿಸಿ ಬಂದಿದ್ದಾರೆ. ಅವರ ಬಗ್ಗೆ ಸರ್ಕಾರಕ್ಕೆ ಹಾಗೂ ಯಡಿಯೂರಪ್ಪರಿಗೆ ಗೌರವವಿದೆ. ಅವರನ್ನ ಗೌರವಯುತವಾಗಿ ನಡೆಸಿಕೊಂಡು ಹೋಗಲಾಗುವುದು ಎಂದು ಹೇಳಿದರು.