ಕಲಬುರ್ಗಿ: ಕೃಷಿ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಹಾಗೂ ಆರ್ಥಿಕವಾಗಿ ಹಿಂದುಳಿದ ರೈತರಿಗೆ ನೆರವು ನೀಡಲು ದೇಶದಾದ್ಯಂತ 10 ಸಾವಿರ ಕೃಷಿ ಉತ್ಪಾ ದಕರ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಶನಿವಾರ ಸುದ್ದಿಗೋಷ್ಠಿ ಯಲ್ಲಿ ಅವರು, ಕರ್ನಾಟಕದಲ್ಲಿ 750 ಸಂಘಗಳನ್ನು ಸ್ಥಾಪಿಸುವ ಮುಖ್ಯಮಂತ್ರಿ ಅವರ ಘೋಷಣೆ ಶ್ಲಾಘನೀಯ. ರೈತರೇ ರಚಿಸಿಕೊಳ್ಳುವ ಸಂಘಗಳಿಗೆ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಲಿದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಿದೆ. ಅವರ ಆದಾಯ ದ್ವಿಗುಣಗೊಳ್ಳಲಿದೆ ಎಂದರು.
ಕೇಂದ್ರದಿಂದ ಈ ಮೊದಲು ಕೃಷಿ ಇಲಾಖೆಗೆ ₹ 23 ಸಾವಿರ ಕೋಟಿ ನೀಡಲಾಗುತ್ತಿತ್ತು. ರೈತರ ನೆರವಿಗೆ ಬರಲು ಪ್ರಧಾನಿ ಮೋದಿ ಅವರು ₹ 1.23 ಲಕ್ಷ ಕೋಟಿ ಹಣವನ್ನು ಕೃಷಿಗೆ ಹಾಗೂ ₹ 8,500 ಕೋಟಿಯನ್ನು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಗೆ (ಐಸಿಎಆರ್) ನಿಗದಿಪಡಿಸಿದ್ದಾರೆ ಎಂದು ತಿಳಿಸಿದರು.