News Karnataka Kannada
Monday, May 06 2024
ಕಲಬುರಗಿ

ಸಿಡಿಲು ಬಡಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಕಲಬುರಗಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಾದ್ಯಂತ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಸಿಡಿಲು ಸಹಿತ ಮಳೆಯಾಗಿದೆ. ಪರಿಣಾಮ ಮಹೇಶ್(10) ಬಾಲಕ ಮೃತಪಟ್ಟಿದ್ದಾನೆ.

ಕೆಲಸಕ್ಕೆಂದು ಪೋಷಕರೊಂದಿಗೆ ಜಮೀನಿಗೆ ತೆರಳಿದ್ದ ಬಾಲಕ ಮಳೆ ಬಂತು ಎಂದು ವಾಪಸ್ ಬಂದಿದ್ದಾರೆ. ಈ ವೇಳೆ ಬಂಡಿಯಲ್ಲಿ ಕುಳಿತಿದ್ದ ಬಾಲಕನಿಗೆ ಸಿಡಿಲು ಬಡಿದಿದೆ. ಪರಿಣಾಮ ಬಾಲಕ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನು ಕಲಬುರಗಿ ನಗರ ಸೇರಿ ಜಿಲ್ಲೆಯಾದ್ಯಂತ ಬಿರುಗಾಳಿ ಗುಡುಗು ಸಹಿತ ಸುರಿದ ಅಕಾಲಿಕ ಮಳೆಯ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಹಲವೆಡೆ ಮನೆಯ ಶೆಡ್‌ಗಳು ಕಿತ್ತುಹೋಗಿವೆ. ರೈತರ ಬೆಳೆಗಳು ನೆಲಕಚ್ಚಿವೆ.

ಆಳಂದ ತಾಲೂಕಿನ ಖಜೂರಿ ಬಳಿ ಬಿರುಗಾಳಿ ಆರ್ಭಟಕ್ಕೆ ಲಾರಿಯೇ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು